ಜನ ಮನದ ನಾಡಿ ಮಿಡಿತ

Advertisement

ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಹುಡುಗರು ಸಿನಿಮಾದ ಪಂಕಜಾ ಹಾಡಿನ ನಟಿ ನಿಧನ

ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ ದಿಂದ ನಿಧನ ಹೊಂದಿದ್ದಾರೆ.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‌ನ ನಟ, ನಟಿಯರು ಬಿಗ್ ಶಾಕ್‌ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು. ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆದಾಗಲೇ ನಟಿಯು ಕೊನೆಯುಸಿರೆಳೆದಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಕೂಡ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ. 2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್‌ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು. ಶೆಫಾಲಿ ಜರಿವಾಲಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!