ಜನ ಮನದ ನಾಡಿ ಮಿಡಿತ

Advertisement

ಕೊಪ್ಪಳ: 3ನೇ ಪತ್ನಿಯ ಉಸಿರು ನಿಲ್ಲಿಸಿದ್ದ ಕಿರಾತಕ ಗಂಡ…. 23 ವರ್ಷದಿಂದ ನಾಪತ್ತೆಯಾಗಿದ್ದ ಪಾಪಿ ಈಗ ಅರೆಸ್ಟ್

ಮೂರನೇ ಹೆಂಡತಿಯ ಜೀವ ತೆಗೆದು ನಾಪತ್ತೆ ಆಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ 23 ವರ್ಷಗಳ ಬಳಿಕ ಅರೆಸ್ಟ್ ಮಾಡಿದ್ದಾರೆ.

ಹಾಲದಾಳ ಗ್ರಾಮದ ಆರೋಪಿ ಹನುಮಂತಪ್ಪ ನನ್ನ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯು ತನ್ನ 3ನೇ ಹೆಂಡತಿ ರೇಣುಕಮ್ಮಳನ್ನ ಸುಳ್ಳು ಹೇಳಿ ಮದುವೆ ಆಗಿದ್ದನು. ನನಗೆ ಸರ್ಕಾರಿ ಕೆಲಸ ಇದೆ ಎಂದು ಹೆಂಡತಿಯ ಮನೆಯವರನ್ನು ನಂಬಿಸಿ ಮದುವೆಯಾಗಿದ್ದನು.

ಮದುವೆಯಾದ ಮೇಲೆ 2002ರಲ್ಲಿ ಹೆಂಡತಿಯನ್ನ ಯಾರಿಗೂ ಗೊತ್ತಾಗದ ಹಾಗೇ ಕೊಲೆ ಮಾಡಿ ಬಳಿಕ ಗೋಣಿಚೀಲದಲ್ಲಿ ಮೃತದೇಹ ಹಾಕಿ ಕಂಪ್ಲಿಗೆ ಹೋಗುತ್ತಿದ್ದ ಬಸ್‌ವೊಂದಕ್ಕೆ ಹಾಕಿದ್ದನು. ಇದಾದ ಮೇಲೆ ಆರೋಪಿಯು ಕೂಡ ನಾಪತ್ತೆ ಆಗಿದ್ದನು. ಇತ್ತೀಚೆಗೆ ಸ್ವಗ್ರಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮಕ್ಕೆ ಹನುಮಂತಪ್ಪ ಬಂದಿದ್ದನು. ಕೊಪ್ಪಳದ ಗಂಗಾವತಿ ಠಾಣೆಯ ಪೊಲೀಸರು 23 ವರ್ಷದ ಬಳಿಕ ಹನುಮಂತಪ್ಪನನ್ನ ಅರೆಸ್ಟ್ ಮಾಡಿದ್ದಾರೆ. ಅತ್ತ ಮಗಳನ್ನು ಕಳೆದುಕೊಂಡ ಪೋಷಕರು ಈಗಲೂ ಕಣ್ಣೀರು ಹಾಕುತ್ತಿದ್ದಾರೆ. ಈ ಹಿಂದೆ ಗಂಗಾವತಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!