ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಲಾ ಕಟ್ಟಡದ ಮೇಲ್ಬಾವಣಿ ಕುಸಿತ; ಮಕ್ಕಳು ಹೊರಗೋಡಿದ್ದರಿಂದ ತಪ್ಪಿದ ಭಾರೀ ಅನಾಹುತ

ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಬಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ. ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ ಕೆ ಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ.

ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!