ಸುರ್ಜೇವಾಲಾ ರಾಜ್ಯ ಬಂದಿರೋದು ಕಪ್ಪ ಪಡೆಯಲು ಎಂಬ ಸಿಟಿ ರವಿ ಹೇಳಿಕೆ ವಿಚಾರಕ್ಕೆ ಪದ್ಮರಾಜ್ ಆರ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಟಿ ರವಿ ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ. ಸುರ್ಜೇವಾಲಾ ಅವರು ಶಾಸಕರು ಸಮಸ್ಯೆಯನ್ನ ಆಲಿಸಲು ಬಂದಿದ್ದಾರೆ. ಸಿಟಿ ರವಿ ಅವರು ಬೇರೆ ಬೇರೆ ರಾಜ್ಯದ ಉಸ್ತುವಾರಿ ಆಗಿ ಕೆಲಸ ಮಾಡಿದ್ದಾರೆ. ಆ ರಾಜ್ಯಕ್ಕೆ ಭೇಟಿ ನೀಡಿದಾಗ ಕಪ್ಪ ಪಡೆಯಲು ಹೋಗಿದ್ದೀರಾ? ಎಂದು ಪ್ರಶ್ನಿಸಿದ್ರು. ಇದೇ ವೇಳೆ ಪುತ್ತೂರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.



