ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ: ವೈದ್ಯರ ದಿನಾಚಾರಣೆ ಹಿನ್ನಲೆ ನಿಟ್ಟೆ ವಿವಿಯಲ್ಲಿ ನಾಲ್ವರು ಹಿರಿಯ ಖ್ಯಾತ ವೈದ್ಯರಿಗೆ ಸನ್ಮಾನ

ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ವತಿಯಿಂದ ಡಾ. ಬಿ.ಸಿ.ರಾಯ್ ಜನ್ಮದಿನ ಪ್ರಯುಕ್ತ ನಡೆದ ವೈದ್ಯರ ದಿನ ಕಾರ್ಯಕ್ರಮ ಆವಿಷ್ಕಾರ್ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಕುಟುಂಬ ವೈದ್ಯರುಗಳಾದ ಡಾ. ಎಂ. ನೀಲಯ್ಯ ಗಂಜೀಮಠ, ಡಾ. ರಾಮಚಂದ್ರ ಐತಾಳ್ ಹೆಬ್ರಿ, ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಬಳಿಕ ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸನ್ಮಾನ ಸ್ವೀಕರಿಸಿ ಮಾತನಾಡಿ, ವೈದ್ಯಕೀಯ ವೃತ್ತಿಗೆ ಕಾಲಿಟ್ಟ ಬಳಿಕ ನಾವು ಎಷ್ಟು ಜ್ಞಾನವಂತರಾಗುತ್ತೇವೆ, ಕೌಶಲ್ಯ ವೃದ್ಧಿಸಿಕೊಂಡಿದ್ದೇವೆ ಎಂಬುದು ಎಷ್ಟು ಮುಖ್ಯವಾಗುತ್ತದೆಯೋ ಹಾಗೆಯೇ ನಮ್ಮನ್ನು ಸಾಕಿ ಬೆಳೆಸಿದ ಪೋಷಕರನ್ನು ಹಾಗೂ ಶಿಕ್ಷಣ ನೀಡಿದ ಸಂಸ್ಥೆಯ ಕೊಡುಗೆ ಯಾವುದೇ ಕಾಲಕ್ಕೂ ಮರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ. ಎಂ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!