ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆರೋಪಿ ಶ್ರೀಕೃಷ್ಣ ಜೆ ರಾವ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.10ಕ್ಕೆ ಮುಂದೂಡಿಕೆ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಪುತ್ತೂರಿನ ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.10ಕ್ಕೆ ಮುಂದೂಡಿಕೆಯಾಗಿದೆ.

ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿರುವ ಆರೋಪಿ ಶ್ರೀಕೃಷ್ಣ ಜೆ. ರಾವ್ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.3ರಂದು ನಡೆದಿತ್ತು. ಸಂತ್ರಸ್ತ ಯುವತಿಯ ಪರವಾಗಿ ಆಕೆಯ ತಾಯಿ ನಮಿತಾರವರು ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹಾಜರಾದ್ರು. ಸಂತ್ರಸ್ತೆಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿತ್ತು. ಆದರೆ, ಆಕೆ ಮೂರು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆಯ ತಾಯಿ ನ್ಯಾಯಾಧೀಶರಿಗೆ ತಿಳಿಸಿದರಲ್ಲದೆ, ಆರೋಪಿಗೆ ನಿರೀಕ್ಷಣಾ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯ ತಾಯಿಯ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಸರಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಜು. 10ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!