ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಕುಡಿತದ ನಶೆಯಲ್ಲಿ ಗಾಜು ಒಡೆದ ವಿವಾಹಿತ ದಾರುಣ ಸಾವು

ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್‌ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ 38 ವರ್ಷದ ನಿತೇಶ್ ನಾಯಕ್ ಸಾವನ್ನಪ್ಪಿದ್ದಾನೆ.

ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ ಹಾಗೂ ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈಯಲ್ಲಿರುವ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.

ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಪಡೆದಿದ್ರು. ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!