ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್‌ಪೋರ್ಟ್ನಲ್ಲೇ ನಿಲ್ಲಿಸಲಾಯಿತು.

ಏರ್ ಇಂಡಿಯಾ ಪೈಲಟ್ ಅನಾರೋಗ್ಯದಿಂದಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ವಿಮಾನಕ್ಕೆ ಸ್ವಲ್ಪ ಅಡಚಣೆ ಉಂಟಾಯಿತು. ವಿಮಾನ ಟೇಕ್ ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಪೈಲಟ್ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೂಲಗಳ ಪ್ರಕಾರ, ಬೆಂಗಳೂರಿನಿಂದ ದೆಹಲಿಗೆ ಎ12414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು. ಇದಕ್ಕೆ ಏರ್ ಇಂಡಿಯಾ ವಿಮಾನವನ್ನು ಚಲಾಯಿಸಲು ಬದಲಿ ಪೈಲಟ್ ವ್ಯವಸ್ಥೆ ಮಾಡಿತು. ಈ ಅನಿರೀಕ್ಷಿತ ಘಟನೆಯಿಂದಾಗಿ, ಪ್ರಯಾಣಿಕರು ಸ್ವಲ್ಪ ತಡವಾಗಿ ದೆಹಲಿಯನ್ನು ತಲುಪಿದ್ದಾರೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ದೃಢಪಡಿಸಿದೆ. ಜುಲೈ 4ರ ಮುಂಜಾನೆ ನಮ್ಮ ಪೈಲಟ್‌ಗಳಲ್ಲಿ ಒಬ್ಬರಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಇತ್ತು. ಇದರ ಪರಿಣಾಮವಾಗಿ ಆ ಪೈಲಟ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಲು ಸಾಧ್ಯವಾಗದೆ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಏರ್ ಇಂಡಿಯಾ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪೈಲಟ್ ಈಗ ಸ್ಥಿರ ಸ್ಥಿತಿಯಲ್ಲಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!