ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು…!

ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.

2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌ0ಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ. ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!