ಜನ ಮನದ ನಾಡಿ ಮಿಡಿತ

Advertisement

ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು – ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ : ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಅಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿಕೆ ನೀಡಿದ್ದಾರೆ.ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸಣ್ಣ ಸಾಲಗಾರರು ಪಡೆದಿರುವ ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಶ್ನೆಯೊಂದರಕ್ಕೆ ಈ ರೀತಿ ಉತ್ತರವನ್ನು  ನಿರ್ಮಲ  ಸೀತಾರಾಮನ್ ನೀಡಿದ್ದಾರೆ ಎಂದು ವರದಿಯಾಗಿದೆ.ಕೆಲವು ಬ್ಯಾಂಕ್‌ಗಳು ಕಠೋರ ನಿಯಮಗಳು ಹಾಗೂ ದರ್ಪ ಮತ್ತು ನಿಷ್ಕರುಣೆಯಿಂದ ಸಾಲ ಮರುಪಾವತಿಯನ್ನು ಅನುಸರಿಸಿವೆ ಎಂಬುದರ ಕುರಿತು  ದೂರುಗಳನ್ನು ಸ್ವೀಕರಿಸಿದ್ದೇನೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಮಾನವೀಯತೆ ಮತ್ತು ಸೂಕ್ಷ್ಮತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಷಯವನ್ನು ಸಮೀಪಿಸಬೇಕು ಎಂದು ಸರಕಾರವು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು ಎಂಬುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!