ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ 18 ವರ್ಷದ ಅಫ್ತಾಬ್ ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಫ್ತಾಬ್ ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ವಿವಾಹವಾಗಿದ್ದಾರೆ. ಅವರ ತಾಯಿ ಕೋವಿಡ್ ಸಮಯದಲ್ಲಿ ನಿಧನರಾಗಿದ್ರು. ಅಂದಿನಿಂದ ತಂದೆ ಮತ್ತು ಮಗ ಮಾತ್ರ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆಟೋ ರಿಕ್ಷಾ ಚಾಲಕರಾದ ಅಲಿ, ಮಧ್ಯಾಹ್ನದವರೆಗೂ ತಮ್ಮ ಮಗನೊಂದಿಗೆ ಮನೆಯಲ್ಲಿದ್ರು. ಅವರು ಸುಮಾರು 1 ಗಂಟೆಗೆ ಕೆಲಸಕ್ಕೆ ಹೋದ ನಂತರ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!