ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜುಲೈ 11ರಂದು `ಧರ್ಮ ಚಾವಡಿ’ತುಳು ಚಿತ್ರ ಬಿಡುಗಡೆ; ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ಸಿನಿಮಾ

ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಮಾಹಿತಿ ಕೊಟ್ಟಿದ್ದಾರೆ. ಚಿತ್ರತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಚಿತ್ರ ನಿರ್ದೇಶಕ ನಿತಿನ್ ರೈ ಮಾತನಾಡಿ, ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು, ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟಿ ಧನ್ಯ ಪೂಜಾರಿ, ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನೇಹಾ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!