ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘಟನೆಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ದುಡಿಯುವ ವರ್ಗದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಕ್ಷರ ದಾಸೋಹ ನೌಕರರ ಸಂಘದಿಂದ ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪೀಕರಿಸಲಾಗಿದೆ. ಅಕ್ಷರ ದಾಸೋಹ, ಆಶಾ ಕಾರ್ಮಿಕರನ್ನು ಖಾಯಂಗೊಳಿಸಬೇಕು ಮತ್ತು ಕನಿಷ್ಠ ವೇತನ ಜಾರಿಗೊಳಿಸಬೇಕು. ಕಾರ್ಮಿಕ ಕಾನೂನುಗಳಲ್ಲಿ ಕೆಲಸದ ಅವಧಿ ಹೆಚ್ಚಳ ಸೇರಿದಂತೆ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಮಾಡುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಮತ್ತು ಜೀವನ ಯೋಗ್ಯ ಕನಿಷ್ಠ ವೇತನ ರೂ. 36ಸಾವಿರ ನಿಗದಿಗಾಗಿ ಗುತ್ತಿಗೆ ಮುಂತಾದ ಖಾಯಂಯೇತರ ಕಾರ್ಮಿಕರ ಖಾಯಂಗೆ ಶಾಸನಕ್ಕಾಗಿ, ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಪಿಂಚಣಿ ಸೇರಿದಂತೆ ಕಲ್ಯಾಣ ಸೌಲಭ್ಯಗಳ ಜಾರಿಗಾಗಿ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಮದ್ಯಾಹ್ನದ ಊಟದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಿತು. ಕಾರ್ಮಿಕ ಮುಖಂಡೆ ಈಶ್ವರಿ ಅವರು ಮಾತನಾಡಿ, ರಾಜ್ಯ ಸರಕಾರ ಇರಬಹುದು ಕೇಂದ್ರ ಸರಕಾರ ಇರಬಹುದು ದುಡಿಯುವ ವರ್ಗಗಳಿಗೆ ಯಾವುದೇ ಸೌಲಭ್ಯ ಒದಗಿಸಿಲ್ಲ. ಇವತ್ತು ಕಾನೂನು ಕಾಯ್ದೆಗಳು ಜಾರಿ ಆದರೆ ನಮಗೆ ಸಿಗುವ ವೇತನ, ಬೋನಸ್, ಸಮಾನ ವೇತನದ ಹಕ್ಕುಗಳನ್ನು ಕಳೆದುಕೊಳ್ಳುತ್ತೇವೆ. ಮುಂದೆ ಸರಕಾರ ಎನು ಮಾಡಿದರೂ ಒಪ್ಪಿಕೊಳ್ಳಬೇಕು. ಆ ಮೂಲಕ ಸರಕಾರ ನಿಮ್ಮ ಶೋಷಣೆ ಮಾಡುವವರು ನಾವು ಎಂದು ಬಹಿರಂಗವಾಗಿ ಹೇಳುವಂತಾಗಿದೆ. ಸರಕಾರದ ಆ ಕುರ್ಚಿಯನ್ನು ಎಳೆದು ರಸ್ತೆಗೆ ಬಿಸಾಡುವ ತಾಕತ್ತು ನಮಗಿದೆ. ಮುಂದಿನ ದಿನ ನಮ್ಮ ಹೋರಾಟ ತೀವ್ರ ಗೊಳಿಸಬೇಕು. ಕೆಂಬಾವುಟ ಚುನಾವಣೆಯಲ್ಲಿ ಸೋತಿರಬಹುದು. ಆದರೆ ಕೆಂಬಾವುಟ ಹಿಡಿದು ಮಾಡಿದ ಹೋರಾಟಗಳು ಎಲ್ಲೂ ಸೋಲಿಲ್ಲ ಯಶಸ್ವಿಯಾಗಿದೆ ಎಂದು ಹೇಳೀದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!