ಜನ ಮನದ ನಾಡಿ ಮಿಡಿತ

Advertisement

ಪಜೀರು: ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ: ಗೃಹ ಸಚಿವ ಪರಮೇಶ್ವರ್

ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣದ ಯೋಜನೆಯಿದ್ದು, ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ಉಳ್ಳಾಲ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ದ.ಕ ಜಿಲ್ಲೆಯ ಮೂಲ್ಕಿ ಹಾಗೂ ಕಡಬ ತಾಲೂಕಿನಲ್ಲೂ ಶೀಘ್ರದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣವಾಗಲಿದೆ ಎಂದು ಕರ್ನಾಟಕ ರಾಜ್ಯದ ಗೃಹಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಅವರು ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಬಳಿ ನೂತನವಾಗಿ ನಿರ್ಮಾಣವಾಗಲಿರುವ ಅಗ್ನಿಶಾಮಕ ಠಾಣೆಗೆ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ್ರು. ಅಗ್ನಿಶಾಮಕ ಮತ್ತು ತುರ್ತುಸೇವೆ ಇಲಾಖೆಯ ಸಿಬ್ಬಂದಿಗಳ ಸೇವೆ, ಪರಿಶ್ರಮ ಬಹಳ ಮುಖ್ಯವಾದದ್ದು. ಎಲ್ಲರನ್ನು ರಕ್ಷಣೆಗಾಗಿ ಅಗ್ನಿಶಾಮಕ ದಳ ತಮ್ಮ ಜೀವವನ್ನು ಅಡವಿಟ್ಟು ಬೇರೆಯವರ ರಕ್ಷಣೆ ಮಾಡುತ್ತಾರೆ. ಇಂದಿನ ಆಧುನಿಕತೆಗೆ ಪೂರಕವಾಗಿ ಅನಾಹುತ ಸಂಭವಿಸಿದಾಗ ಜನರ ರಕ್ಷಣೆಗೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡಿ ಅತ್ಯಾಧುನಿಕ ಯಂತ್ರಗಳು ಹಾಗೂ ಸೌಲಭ್ಯವನ್ನು ಇಲಾಖೆಗೆ ಒದಗಿಸುತ್ತಿದ್ದೇವೆ. ಹಾಗೆಯೇ ನೂತನ ಅಗ್ನಿಶಾಮಕ ವಾಹನ ಖರೀದಿಗೆ 50 ಕೋಟಿ ರೂ.ವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದಾರೆ. ಕೆಮಿಕಲ್ ಇಂಡಸ್ಟ್ರಿ, ಪೆಟ್ರೋಲ್ ಇಂಡಸ್ಟ್ರಿ ಈ ಭಾಗದಲ್ಲಿ ಇರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!