ಜನ ಮನದ ನಾಡಿ ಮಿಡಿತ

Advertisement

ಉಡುಪಿ: 15 ಗಂಟೆಯಲ್ಲೇ ಪೋಕ್ಸೊ ವಿಶೇಷ ಪಿಪಿ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ..!

ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ ಪರವಾಗಿ ಹಿರಿಯ ನ್ಯಾಯವಾದಿ ಪಿಪಿ ಹೆಗ್ಡೆ ವಾದಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ, ನಾನು ತಲೆಮರೆಸಿಕೊಂಡಿಲ್ಲ. ನನ್ನ ಕಚೇರಿಯಲ್ಲಿಯೇ ಇದ್ದೇನೆ. ಬಿಎನ್‌ಎಸ್ ಕಾಯ್ದೆ ಪ್ರಕಾರ 14 ದಿನಗಳ ಪ್ರಾಥಮಿಕ ತನಿಖೆಯನ್ನು ನಡೆಸಿ, ಪ್ರಕರಣ ದಾಖಲಿಸಬೇಕಿತ್ತು. ಪೋಲಿಸರು ಒತ್ತಡಕ್ಕೆ ಮಣಿದು ಏಕಾಏಕಿ ಪ್ರಕರಣ ದಾಖಲಿಸಿರುವುದು ಸಮಂಜಸವಲ್ಲ. ಅಲ್ಲದೇ ನನ್ನ ಕಚೇರಿಯಲ್ಲಿ ಕೆಲಸವನ್ನು ಬಿಟ್ಟು 8 ವರ್ಷದ ಬಳಿಕ, ಅಂದು ಜಾತಿ ನಿಂದನೆ ಮಾಡಿದ್ದೇನೆ ಎಂದು ದೂರು ನೀಡಿದ್ದಾರೆ. ಇದೊಂದು ಸುಳ್ಳು ಪ್ರಕರಣ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!