ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಮನೆಯ ಮೇಲೆಯೇ ಗುಡ್ಡ ಕುಸಿದು ಮನೆಗೆ ಹಾನಿ..!

ಕಾಸರಗೋಡು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ.

ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ. ಈ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆ ಸಮೀಪದ ಗುಡ್ಡ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ. ಬೃಹತ್ ಕಲ್ಲು ಸಹಿತ ಮಣ್ಣು ಮನೆಯ ಒಂದು ಭಾಗದ ಮೇಲೆ ಬಿದ್ದು ದೊಡ್ಡ ಅಪಾಯಕ್ಕೆ ಕಾರಣವಾಗಿದೆ. ಅವಘಡದಿಂದ ಮನೆಯ ಒಂದು ಕೊಠಡಿ ಸಂಪೂರ್ಣವಾಗಿ ಕುಸಿದಿದ್ದು,ಮನೆ ಭಾಗಶಃ ಹಾನಿಗೆ ಒಳಗಾಗಿದೆ. ಅದೃಷ್ಟವಶಾತ್ ಜೀವ ಹಾನಿ ಉಂಟಾಗಿಲ್ಲ. ಮನೆಯಲ್ಲಿ ನಾಲ್ವರು ವಾಸಿಸುತ್ತಿದ್ದು, ಕುಸಿತದ ಸದ್ದು ಕೇಳಿ ಮನೆಯಲ್ಲಿದ್ದವರು ಹೊರಗೆ ಓಡಿ ಬಚಾವಾಗಿದ್ದಾರೆ. ಮನೆಯ ಸಮೀಪದ ಗುಡ್ಡ ಕುಸಿಯುವ ಬಗ್ಗೆ ಈ ಹಿಂದೆಯೇ ಸಂಶಯಗಳಿದ್ದು, ಎರಡು ವರ್ಷಗಳ ಹಿಂದೆಯೇ ಕಂದಾಯ ಇಲಾಖೆಯ ಅಧಿಕೃತರಿಗೆ ಮನವಿ ನೀಡಿ ವಿಷಯದ ಗಂಭೀರತೆಯನ್ನು ತಿಳಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!