ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಶಿಥಿಲಗೊಂಡಿರುವ ಸರ್ಕಾರಿ ಶಾಲೆ ಕೊಠಡಿ : ಆತಂಕದಲ್ಲಿ ಪಾಠ ಕೇಳುತ್ತಿರುವ ಮಕ್ಕಳು

ಹನಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರವಚನ ಕೊಠಡಿ ಮತ್ತು ಅಡುಗೆ ಮನೆಯ ಕೊಠಡಿ ತುಂಬಾ ಹಳೆಯದಾದ ಹಾಗೂ ಮಳೆ ಕಾರಣದಿಂದ ಪೂರ್ಣವಾಗಿ ಶಿಥಿಲಗೊಂಡಿದ್ದು, ಮಕ್ಕಳು ಶಿಥಿಲವಾದ ಕಟ್ಟಡದಲ್ಲೇ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣ ಆಗಿದೆ.

ಹಾಗಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸುವ ಪರಿಸ್ಥಿತಿ ಎದುರಾಗಿದೆ. ಕಟ್ಟಡದ ಮೇಲ್ಬಾವಣಿ ಕುಸಿಯಲು ಆರಂಭಿಸಿದೆ. ಜೊತೆಗೆ ಶಾಲೆಗೆ ಸೂಕ್ತವಾದ ಕಾಂಪೌಂಡ್ ಇಲ್ಲ, ಸಮರ್ಪಕ ಮೈದಾನ ಇಲ್ಲ- ಹೀಗೆ ಹಲವಾರು ಅವ್ಯವಸ್ಥೆಗಳಿಂದ ಕೂಡಿದ್ದು, 1-7 ರವರೆಗೆ 160ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದು, ಶಾಲೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಇದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಮತನಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ತುಂಬಾ ಕಡಿಮೆ ಅದರಲ್ಲೂ ಈ ರೀತಿಯ ಸೌಲಭ್ಯ ಕೊರತೆಯ ಕಾರಣಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಇಷ್ಟಪಡುವುದಿಲ್ಲ. ಆದಾಗಿ ಈ ಮೂಲಕನಾದರೂ ಅಧಿಕಾರಿಗಳು, ಜನಪ್ರತಿನಿದಿಗಳು ಗಮನವಹಿಸಿ ಶಾಲೆಯ ಕಟ್ಟಡಗಳನ್ನು ದುರಸ್ತಿಗೊಳಿಸಿ ಮಕ್ಕಳು ನೆಮ್ಮದಿಯಿಂದ ಪಾಠ ಪ್ರವಚನ ಕೇಳಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!