ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಹೂಳೆತ್ತುವ ವೇಳೆ ನೀರುಪಾಲಾಗಿದ್ದ ಕೇಶವ; ಪತ್ತೆ..!

ಭಾರೀ ಮಳೆ ಹಿನ್ನೆಲೆ ಹೊಳೆ ದಾಟುವ ಸಂದರ್ಭ ಕಾಲುಸಂಕದಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಕೂಲಿಕಾರ್ಮಿಕರ ಮೃತದೇಹ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.

ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದ ಮುಖೇನ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ರು. ಅವರ ಮೃತ ದೇಹವು ಪತ್ತೆಯಾಗಿದ್ದು, ಅವರನ್ನು ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ 64ವರ್ಷದ ಕೇಶವ ಶೆಟ್ಟಿ ಎಂದು ಗುರುತಿಸಲಾಗಿದೆ. ಜುಲೈ 18ರಂದು ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ.ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ರು. ಮನೆ ಮಂದಿ ,ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!