ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಯುಎಇ ಎಂಬಲ್ಲಿ ನಡೆದಿದೆ. ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ( 29) ಮೃತ ಮಹಿಳೆಯಾಗಿದ್ದಾರೆ.

2014ರಲ್ಲಿ ಅತುಲ್ಯ ಕೊಲ್ಲಂ ನಿಚಾಸಿ ಶೆಖರ್ ಎಂಬವರನ್ನು ಮದುವೆಯಾಘಿ ಶಾರ್ಜಾದ ಅಪಾರ್ಟ್ವೊಂದರಲ್ಲಿ ನೆಲೆಸಿದ್ದರು, ಮದುವೆ ವೇಳೆ ಸತೀಶ್ ಗೆ 320ಗ್ರಾಂ ಚಿನ್ನ ಹಾಗೂ ಒಂದು ಬೈಕನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಆದರೆ ಮದುವೆಯಾದಾಗಿನಿಂದ ಪತಿ ಅತುಲ್ಯಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜುಲೈ 18 ಮತ್ತು 19 ರ ನಡುವೆ ಸತೀಶ್ ಅತುಲ್ಯಳನ್ನು ಉಸಿರುಗಟ್ಟಿಸಿ, ಹೊಟ್ಟೆಗೆ ಒದ್ದು, ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆಕೆಯ ತಾಯಿ ಆರೊಪ ಮಾಡಿದ್ದಾರೆ. ಘಟನೆ ಸಂಬಂಧ ಪತಿ ಸತೀಶ್ ವಿರುಧ್ಧ ಪ್ರಕರಣ ಕೂಡ ದಾಖಲಾಗದೆ.



