ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ

ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ. ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ. ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!