ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, 470 ಮಿಲಿಗ್ರಾಂ ಚಿನ್ನ ಹಾಗೂ 1700 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮಧ್ಯಪ್ರದೇಶ ರಾಜ್ಯದವರಾಗಿದ್ದು, ಉಡುಪಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಅಲ್ಲದೇ ತಮ್ಮ ಸಹಚರರೊಂದಿಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಳವು ಮಾಡಿದವರಾಗಿದ್ದಾರೆ. ಇವರ ಮೇಲೆ ಮಹಾರಾಷ್ಟ್ರ ರಾಜ್ಯದಲ್ಲಿ ಸಹ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!