ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜು. 24 ರಂದು ಸಂಜೆ ವೇಳೆ ನಡೆದಿದೆ.

ಮೃತ ಬೈಕ್ ಸವಾರನನ್ನು ರೋಧಿಲಾಲ್ ಎಂದು ಗುರುತಿಸಲಾಗಿದೆ. ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕದಲ್ಲಿ ಈ ಅಪಘಾತ ಸಂಭವಿಸಿದೆ. ಕೆರಾಡಿ ಕಡೆಯಿಂದ ಕಾರಿಬೈಲು ಕಡೆಗೆ ಬರುತ್ತಿದ್ದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದಿದ್ದಾನೆ. ಬಿದ್ದವನ ತಲೆಯ ಮೇಲೆ ಲಾರಿ ಹರಿದಾಡಿದ್ದು ಬೈಕ್ ಸವಾರ ರೋಧಿಲಾಲ್ ನ ಸ್ಥಳದಲ್ಲಿಯೇ ಪ್ರಾಣಪಕ್ಷಿ ಹಾರಿಹೋಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



