ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು: ಪಿಕಪ್ ಜೀಪ್ ಪಲ್ಟಿಯಾಗಿ ಮಗ ನದಿ ಪಾಲಾದ ಸುದ್ದಿ ಕೇಳಿ ಕೆರೆಗೆ ಹಾರಿದ ತಾಯಿ

ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಪಿಕಪ್ ಜೀಪ್ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಯುವಕ ಸಾ*ವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ.

ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ನದಿಗೆ ಬಿದ್ದು 23 ವರ್ಷದ ಶಮಂತ್ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಿಯುತ್ತಿರುವ ಮಳೆಯಿಂದ ಕಾರ್ಯಾಚರಣೆಗೂ ತೊಂದರೆಯುಂಟಾಗಿದೆ.

ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮುಳುಗು ತಜ್ಞ ಮಲ್ಪೆ ಈಶ್ವರ್ ಅವರನ್ನೂ ಕರೆಸಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಮಧ್ಯೆ ಆಘಾತಕಾರಿ ಸುದ್ದಿ ಅಂದರೆ, ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ತುಂಬಾನೇ ನೊಂದುಕೊಂಡ ತಾಯಿ, ಮನೆಯ ಹಿಂದಿನ ಕೆರೆಗೆ ಹಾರಿ ಜೀವ ಬಿಟ್ಟಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ, ಸಂಬಂಧಿಕರಲ್ಲಿ ದುಃಖ ಮತ್ತಷ್ಟು ಮುಡಿಗಟ್ಟಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!