ಜನ ಮನದ ನಾಡಿ ಮಿಡಿತ

Advertisement

ಕಡಬ: 3 ದಿನಗಳ ಹಿಂದೆ ನಾಪತ್ತೆಯಾದ ಅಂಬ್ಯುಲೆನ್ಸ್ ಚಾಲಕನ ಮೃ#ತದೇಹ ಪತ್ತೆ…!

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆಯವರು ಜುಲೈ 22ರಂದು ನಾಪತ್ತೆಯಾಗಿದ್ದರು.

ಈ ಸಂಬ0ಧವಾಗಿ ಅವರ ಪತ್ನಿ ಶ್ರೀಮತಿ ಪ್ರೇಮ ನೀಡಿದ ದೂರಿನ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಹೊನ್ನಪ್ಪ ಅವರು ಒಂದು ಹೊಳೆಬದಿಗೆ ತೆರಳುತ್ತಿರುವ ದೃಶ್ಯಗಳು ಸಿಕ್ಕಿದ ಹಿನ್ನೆಲೆಯಲ್ಲಿ, ಕಳೆದ ಮೂರು ದಿನಗಳಿಂದ ಪೊಲೀಸರು, ಸ್ಥಳೀಯರು ಹಾಗೂ ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿದ್ರು.

ಅಂತಿಮವಾಗಿ, ಜುಲೈ 25ರಂದು ಹೊನ್ನಪ್ಪ ಅವರ ಮೃತದೇಹ ಕುಮಾರಧಾರ ನದಿಯಲ್ಲಿ ಸುಮಾರು 3 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯದಲ್ಲಿ ಈಶ್ವರ್ ಮಲ್ಪೆ, ಎಸ್.ಡಿ.ಆರ್.ಎಫ್ ತಂಡ, ಸ್ಥಳೀಯರು, ರವಿಕಕ್ಕೆಪದವು ತಂಡ ಹಾಗೂ ಸುಳ್ಯದ ಅಂಬುಲೆನ್ಸ್ ಚಾಲಕರ ಸಂಘದವರು ಸಹಕಾರ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!