ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಆಟೋ ರಿಕ್ಷಾ – ಪುರಸಭೆಯ ವಾಹನ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ವಾಹನವೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂಟ್ವಾಳ ಮುಖ್ಯ ಕಟ್ಟಡದಿಂದ ಬಂಟ್ವಾಳ ರಸ್ತೆಗೆ ಹೋಗುತ್ತಿದ್ದ ಪುರಸಭೆಯ ಘನತ್ಯಾಜ್ಯ ವಾಹನವೊಂದು ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರ ಮುಖ, ಕಣ್ಣು ಹಾಗೂ ಎದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಈ ಅಪಘಾತದ ನಿಖರ ಕಾರಣಗಳನ್ನು ತನಿಖೆ ಮಾಡುವ ವೇಳೆ ಪುರಸಭೆಯ ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಅವಧಿ ಮುಗಿದು 2 ವರ್ಷ ಕಳೆದಿದ್ದು, ನವೀಕರಣ ಆಗದೇ ಇರುವುದು ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯ ನಿಯಾಮಾಳಿ ಪ್ರಕಾರ ಎಫ್‌.ಸಿ. ಮಾಡದಿರುವ ವಾಹನ ಬಳಕೆಗೆ ಯೋಗ್ಯವಲ್ಲ. ಅದು ಗುಜರಿ ವಾಹನಕ್ಕೆ ಸಮಾನವಾಗಿದೆ. ಎಫ್‌.ಸಿ. ಇಲ್ಲದ ಗುಜರಿ ವಾಹನವನ್ನು ರಸ್ತೆಗೆ ಇಳಿಸಿದರೆ ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ವಿಮಾ ಪರಿಹಾರಕ್ಕೆ ಪರದಾಡುವ ಸಂಕಷ್ಟ ಎದುರಾಗುತ್ತದೆ. ಈ ಮಧ್ಯೆ ಪೊಲೀಸರಿಗೆ ಒತ್ತಡ ತಂದು ಕೇಸು ದಾಖಲಿಸದಿರಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಪ್ರತಿಭಟಿಸಿದ ಪರಿಣಾಮ ಕೊನೆಗೂ ಎಫ್‌. ಐ. ಆರ್‌. ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ಬಗ್ಗೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!