ಜನ ಮನದ ನಾಡಿ ಮಿಡಿತ

Advertisement

ಸೆಂಟ್ರಲ್ ಜೈಲಿನಿಂದ ಎಸ್ಕೇಪ್ ಆದ ಖೈದಿ ಬಾವಿಯಲ್ಲಿ ಪತ್ತೆ

ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್‌ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್‌ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.

ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.

ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!