ಕೆಲವು ತಿಂಗಳಿನಿ0ದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅರಣ್ಯ ಇಲಾಖೆಯ ತಾತ್ಕಾಲಿಕ ವಾಚ್ಮ್ಯಾನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ವೇದವ್ಯಾಸ ಎಂಬವರು ಮೃತ ಪಟ್ಟವರಾಗಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ಅನಂತ ಶಯನ ಎಂಬಲ್ಲಿ ತಮ್ಮ ಸೋದರಳಿಯ ಸುಮಂತ್ ಅವರ ಜತೆ ವಾಸವಾಗಿದ್ದರು. 12 ವರ್ಷಗಳಿಂದ ಅರಣ್ಯ ಇಲಾಖೆ ಯಲ್ಲಿ ತಾತ್ಕಾಲಿಕ ವಾಚ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ವೇದವ್ಯಾಸ ಅವರಿಗೆ ಕಳೆದ ವರ್ಷ ನವೆಂಬರ್ನಲ್ಲಿ ಕ್ಯಾನ್ಸರ್ ಕಾಯಿಲೆ ಇರುವುದು ಪತ್ತೆ ಯಾಗಿತ್ತು. ಅಂದಿನಿ0ದ ಮನೆಯಲ್ಲೇ ಉಳಿದುಕೊಂಡಿದ್ದ ಅವರು, ಕಾಯಿಲೆಯಿಂದ ತೀವ್ರ ಮನನೊಂದಿದ್ದರು. ಮಾ. 3ರಂದು ಮನೆಯಲ್ಲಿ ಯಾವುದೋ ವಿಷಕಾರಿ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತತ್ಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಇನ್ನು ಈ ಬಗ್ಗೆ ಕಾರ್ಕಳ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



