ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ; ಸಿಕ್ಕಿಬಿದ್ದ ಕಳ್ಳರು

ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.

ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇಬ್ಬರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೇರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ಮತ್ತಷ್ಟೇ ತಿಳಿದುಬರಬೇಕಾಗಿದೆ. ದುಷ್ಕೃತ್ಯ ಎಸಗಲು ಬಂದಿರುವ ಕಳ್ಳನಿಗೆ ಕಡಿಯಾಳಿ ಮಹಿಷಮರ್ಧಿನಿ ದೇವಿಯೇ ಮೂರ್ಛೆ ಭರಿಸಿದ್ದಾಳೆ ಎಂದು ಭಕ್ತರು ಆಡಿಕೊಳ್ಳುತ್ತಿದ್ದಾರೆ. ದೇವಸ್ಥಾನದ ಕಾವಲುಗಾರನ ಕರ್ತವ್ಯ ಪ್ರಜ್ಞೆಗೂ ಶ್ಲಾಘನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!