ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾ.ಹೆದ್ದಾರಿಯಲ್ಲಿ ಅಗೆದ ಗುತ್ತಿಗೆ ಕಂಪೆನಿ..!!

ಬಂಟ್ವಾಳ; ಸತತವಾಗಿ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾದ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿರುವ ಕಾಂಕ್ರೀಟ್ ರಸ್ತೆಯಲ್ಲಿ ಮತ್ತೆ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಕೆಲಸಗಾರರಿಂದ ಅಗೆಯುವ ಕೆಲಸ ಆರಂಭವಾಗಿದೆ.

ಕುದ್ರೆಬೆಟ್ಟು ಎಂಬಲ್ಲಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯ ಪರಿಣಾಮ ನಿರಂತರವಾಗಿ ಅಪಘಾತಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮಾಧ್ಯಮಗಳಲ್ಲಿ ವರದಿಯನ್ನು ಮಾಡಲಾಗಿತ್ತು.ಇದೀಗ ಕಂಪೆನಿಯು ಕಾಂಕ್ರೀಟ್ ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮವಹಿಸಲು ಮುಂದಾಗಿದ್ದು, ಡಿವೈಡರ್‌ನ್ನು ಅಗೆದು ಗುಂಡಿ ಮಾಡುತ್ತಿದೆ. ಡಿವೈಡರ್‌ನ ಭಾಗದಲ್ಲಿ ತಾತ್ಕಾಲಿಕವಾಗಿ ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವುದಕ್ಕೆ ಗುತ್ತಿಗೆದಾರರು ಮುಂದಾಗಿದ್ದು, ಸದ್ಯದ ಮಟ್ಟಿಗೆ ಉಪಯೋಗವಾಗಬಹುದು ಎಂದು ಹೇಳಲಾಗುತ್ತಿದೆ. ಇಲ್ಲಿನ ಕಾಂಕ್ರೀಟ್ ರಸ್ತೆಯಲ್ಲಿ ನೀರು ನಿಂತ ಪರಿಣಾಮವಾಗಿ ವಾಹನ ಸವಾರರ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸಿವೆ. ಎರಡು ದಿನಗಳ ಹಿಂದೆಯಷ್ಟೇ ಅಂಬ್ಯುಲೆನ್ಸ್ ವಾಹನ ಸಹಿತ ಎರಡು ವಾಹನಗಳು ನಿಯಂತ್ರಣ ಕಳೆದು ಪಲ್ಟಿಯಾಗಿದ್ದವು.ಅದೃಷ್ಟವಶಾತ್ ಯಾವುದೇ ಅಪಾಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಮನ ಹರಿಸಿದ ಕಂಪೆನಿಯು ಕಾಮಗಾರಿಯನ್ನು ಆರಂಭಿಸಿದೆ.ಇವರ ಯೋಜನೆ ಮತ್ತು ಯೋಚನೆ ಫಲಪ್ರದವಾಗಿ ಪರಿಣಮಿಸಬಹುದಾ ಎಂಬುವುದನ್ನು ಕಾದುನೋಡಬೇಕಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!