ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರಕ್ಕೆ ಕರೆ

38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ. ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ನೋಡಬೇಕಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!