ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯನ ಶೋಧ ಕಾರ್ಯ ಮುಂದುವರೆದಿದೆ.

ಈತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಆತನ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹೇಮಂತ್ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೊಲೀಸ್ ಇಲಾಖೆ, ಅಗ್ನಿಶಾಮಕದಳದ ಸಿಬ್ಬಂದಿ ನಿನ್ನೆ ಸಂಜೆಯವರೆಗೂ ನದಿಯಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ಆದರೆ ಯಾವುದೇ ಸುಳಿವು ಸಿಗದ ಹಿನ್ನಲೆಯಲ್ಲಿ ಮತ್ತೆ ಇಂದು ಬೆಳಗ್ಗೆಯಿಂದ ನೇತ್ರಾವತಿ ನದಿ ತೀರದಲ್ಲಿ ತುಂಬೆ, ಸಜೀಪ, ಫರಂಗಿಪೇಟೆಗೆ ಶೋಧ ಕಾರ್ಯ ಮುಂದುವರಿಸಲಾಗಿದೆ. ಆದರೆ ಇಂದು ಕೂಡ ಹೇಮಂತ್ ನ ಸುಳಿವು ಸಿಕ್ಕಿಲ್ಲ ಎಂದು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.



