ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಢಿಕ್ಕಿ ಹೊಡೆದ ಕಾರು..!!

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ 25ವರ್ಷದ ನಿತಿಲ್, 23ವರ್ಷದ ಅವಿನಾಶ್ ಹಾಗೂ 2ವರ್ಷದ ಮೃತ್ವಿನ್ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಟೀಲು ಕಡೆಯಿಂದ ದೇವರ ದರ್ಶನ ಮುಗಿಸಿಕೊಂಡು ಕುಂದಾಪುರದ ಕಡೆಗೆ ಹೊರಟಿದ್ದ ಕಾರು, ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮುಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಬರದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಅಪಘಾತದಿಂದ ಎರಡು ಕಾರುಗಳು ಜಖಂಗೊಂಡಿದ್ದು, ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಎರಡು ವಾಹನಗಳನ್ನು ಸ್ಥಳದಿಂದ ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ.ಅಪಘಾತದ ಭೀಕರ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!