ಜನ ಮನದ ನಾಡಿ ಮಿಡಿತ

Advertisement

ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ

ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಕುರಿಗಳ ಹಟ್ಟಿ ಹಾಕಿಕೊಂಡಿದ್ರು. ಆದ್ರೆ, ತಡರಾತ್ರಿ ಭರ್ಜರಿ ಮಳೆ ಬಂದ ಹಿನ್ನೆಲೆ ಕುರಿಗಳನ್ನ ಅಲ್ಲಿಯೇ ಬಿಟ್ಟು ಬೆಳಗಾವಿ ಮೂಲದ ಕುರಿಗಾಯಿಗಳು ಎತ್ತರದ ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಎರಡ್ಮೂರು ಚಿರತೆಗಳು ಕೊಟ್ಟಿಗೆ ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ.

ಕುರಿಗಳನ್ನು ಅರ್ಧಂಬರ್ಧ ಕಚ್ಚಿ ತಿಂದು ಪರಾರಿಯಾಗಿವೆ. ಇದರಿಂದ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಕುರಿಗಾಯಿಗಳು ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ನಿವಾಸಿ ಸೋಮಣ್ಣ ಎಂಬವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಲಿನ ಪ್ರದೇಶದಲ್ಲಿ ಎರಡರಿಂದ ಮೂರು ಚಿರತೆಗಳ ಸುತ್ತಾಟದ ಮಾಹಿತಿ ಇದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!