ಜನ ಮನದ ನಾಡಿ ಮಿಡಿತ

Advertisement

ಪುತ್ತೂರು; ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್..!

 

ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ.

 

 

ರಸ್ತೆಯ ಬದಿಯಲ್ಲಿ ಇಂಟರ್‌ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸೂಫಿ ಇಂತಿಯಾಜ್, ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಸ್ತುತ ನಿವೃತ್ತರಾಗಿರುವ ಇಬ್ರಾಹಿಂ ಅವರ ಸಹೋದರನ ಮಗಳು ನಿಜಿಮಾ ಆಲಿ ಮಾಣಿಪ್ಪಾಡಿ ಅವರ ಹೆಸರಲ್ಲಿರುವ ಈ ಪೆಟ್ರೋಲ್ ಪಂಪ್‌ಗೆ ಗ್ರಾಪಂನಿAದ ಪರವಾನಿಗೆ ಇಲ್ಲ. ಹಾಗಿದ್ದರೂ ಅನಧಿಕೃತವಾಗಿ ಇದನ್ನು ಪೆಂಟ್ರೋಲ್ ಪಂಪ್‌ನ್ನು ನಡೆಸಲಾಗುತ್ತಿದೆ.

ರಾಜ್ಯ ಹೆದ್ದಾರಿಯಿಂದ ಕನಿಷ್ಟ ೪೦ ಮೀಟರ್ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದು ಕಡ್ಡಾಯವಾದ ನಿಯಮ. ಆದರೆ ಈ ಪೆಟ್ರೋಲ್ ಪಂಪು ರಸ್ತೆಯಿಂದ ಕೇವಲ ೨೦ ಮೀಟರ್ ದೂರದಲ್ಲಿ ನಿರ್ಮಿಸಲಾಗಿದೆ. ಅನಧಿಕೃತವಾದ ಮಾನದಂಡವನ್ನೇ ಪಾಲಿಸದೆ ನಿರ್ಮಿಸಲಾಗಿರುವ ಈ ಪೆಟ್ರೋಲ್ ಪಂಪ್ ಬಗ್ಗೆ ಯಾವುದೇ ಇಲಾಖೆಯೂ ತಲೆಕೆಡಿಸಿಕೊಂಡಿಲ್ಲ. ಬಡವರ್ಗದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಗೂಡಂಗಡಿ ಹಾಕಿದರೆ ತಕ್ಷಣ ತೆಗೆದು ಬಿಸಾಡುವ ಅಧಿಕಾರಿಗಳು ಈ ಕಟ್ಟಡ ಅನಧಿಕೃತವಾಗಿದ್ದರೂ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್, ಅಬ್ದುಲ್ ಜವಾದ್, ಶಮೀಮ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!