ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ; ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯ ಕಾರಿಗೆ ಅಪಘಾ*ತ

ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.

ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.

ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.

ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!