ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ; ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯ ಕಾರಿಗೆ ಅಪಘಾ*ತ

ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.

ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.

ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.

ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!