ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಿಳಾ ಬೀದಿಬದಿ ವ್ಯಾಪಾರಿಗೆ ಕಿರುಕುಳ; ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಯತ್ನ!!

ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳಿಂದ ಕಳೆದ ಒಂದು ತಿಂಗಳಿಂದ ನಿರಂತರ ತೊಂದರೆ ನೀಡಿ ಮಹಿಳೆಯ ವ್ಯಾಪಾರಕ್ಕೆ ಅಡ್ಡಿಪಡಿಸಲಾಗುತ್ತಿತ್ತು ಎನ್ನಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಆಟೋ ಪಾರ್ಕಿಗೆ ಅನುಮತಿ ನೀಡದಿದ್ದರೂ ರಾಜಕೀಯ ಒತ್ತಡದಿಂದ ತೆರವುಗೊಳಿಸಲು ಬಲವಂತಪಡಿಸಲಾಗುತ್ತಿತ್ತು, ವ್ಯಾಪಾರದಲ್ಲಿ ಅಪಾರ ನಷ್ಟ ಮತ್ತು ಕಿರುಕುಳ ತಾಳಲಾರದೆ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ಜೀವಿಸುತ್ತಿದ್ದ ಮಹಿಳೆ ಶಾಲಿನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದೀಗ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು ಎ.ಜೆ ಆಸ್ಪತ್ರೆಯ ಐ ಸಿ ಯು ನಲ್ಲಿದ್ದಾರೆ. ನಗರದ ಬೋಂದೆಲ್ ಜಂಕ್ಷನ್ ಬಳಿ ಏರ್ ಪೋರ್ಟ್ ರಸ್ತೆಯಲ್ಲಿ ಪಾಲಿಕೆಯ ಅನುಮತಿ ಇಲ್ಲದೆ ವಿಧಾನ ಪರಿಷತ್ ಸದಸ್ಯರ ಅನುದಾನದಿಂದ ಅನಧಿಕೃತ ರಿಕ್ಷಾ ಪಾರ್ಕ್ ನಿರ್ಮಾಣಗೊಂಡ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!