ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು..!

ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ ಎಂಬ ಆರೋಪದ ಮೇಲೆ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಪೋಲೀಸರು ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದಾರೆ.

ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಅಕ್ಕಿ ದಾಸ್ತಾನು ಇರಿಸಲಾಗಿರುವ ಆರೋಪವಿದ್ದು, ಕಲ್ಲಡ್ಕ ನಿವಾಸಿ ಉಮರಬ್ಬ ಅವರಿಗೆ ಸೇರಿದ ಕಟ್ಟಡ ಇದಾಗಿದೆ. ಇಲ್ಲಿ ಸುಮಾರು 21 ಕಿಂಟ್ವಾಲ್ ಬೆಳ್ತಿಗೆ ಹಾಗೂ 4 ಕಿಂಟ್ವಾಲ್ ಕುಚಲಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜೊತೆಗೆ ಮಾಲಕ ಉಮರಬ್ಬ ಹಾಗೂ ಈತನ ಜೊತೆ ಕೆಲಸಗಾರನಾಗಿರುವ ರಫೀಕ್ ಎಂಬಾತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು 25 ಕಿಂಟ್ವಾಲ್ ಅಕ್ಕಿಯ ಚೀಲಗಳ ಜೊತೆ ಅಕ್ರಮವಾಗಿ ಅಕ್ಕಿಯನ್ನು ಪಡೆಯಲು ಉಪಯೋಗಿಸುತ್ತಿದ್ದ ರಿಕ್ಷಾ ಹಾಗೂ ತೂಕ ಮಾಪನ ಸೇರಿ ದಂತೆ ಒಟ್ಟು ಅಂದಾಜು 85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ನಡೆಸಿದ ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಪ್ರಶಾಂತ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!