ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಮಗುಚಿಬಿದ್ದ ನಾಡದೋಣಿ; ನಾಲ್ವರು ಮೀನುಗಾರರು ಅಪಾಯದಿಂದ ಪಾರು

ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಇಂದು ಮುಂಜಾನೆ ಸಂಭವಿಸಿದೆ.

ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ಅವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಅವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ವರು ಮೀನುಗಾರರ ಜೀವ ರಕ್ಷಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲೂ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನಿಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್ ಮಲ್ಪೆ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!