ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೋಸ: ನಾಲ್ವರು ಆರೋಪಿಗಳ ಬಂಧನ

ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20), ಹೆಜಮಾಡಿ ಕನ್ನಂಗಾರ್ ನಿವಾಸಿ ಅಹಮದ್ ಅನ್ವೀಜ್(20), ಬಂಟ್ವಾಳ ನಿವಾಸಿ ಸಪ್ವಾನ್(30), ಮತ್ತು ತಾಸೀರ್ (31) ಎಂದು ಗುರುತಿಸಲಾಗಿದೆ. ಕಾಪು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್(54) ಎಂಬವರಿಗೆ ಫೇಸ್ ಬುಕ್ ಮೂಲಕ ಆರೋಪಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿತ್ತು. 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬರನ್ನು ನೀಡಿ ಎಫ್‌ಎಕ್ಸ್ಸಿಎಮ್ ಗೋಲ್ಡ್ ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಮೆಸೇಜ್ ಮಾಡಿದ್ದು, ಅದನ್ನು ನಂಬಿದ ಜೊಸ್ಸಿ ತಮ್ಮ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 75,00,000/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಈ ಬಗ್ಗೆ ಜೊಸ್ಸಿ ರವೀಂದ್ರ ಡಿಕ್ರೂಸ್ ಅವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಗೆ ಇಳಿದ ಪೊಲೀಸರ ವಿಶೇಷ ತಂಡವು ಆರೋಪಿಗಳನ್ನು ಬಂಧಿಸಿ ಅವರಿಂದ ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ 4,00,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸದ್ರಿ ಪ್ರಕರಣದ ಇತರ ಆರೋಪಿಗಳು ತಲೆಮರೆಸಿ ಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!