ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ- ಪೊಲೀಸರ ದಾಳಿ”

ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!