ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ- ಪೊಲೀಸರ ದಾಳಿ”

ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!