ಜನ ಮನದ ನಾಡಿ ಮಿಡಿತ

Advertisement

ಬಿ.ಸಿ ರೋಡು: ಹೆದ್ದಾರಿ ಇಲಾಖೆಯವರು ಮಾಡಬೇಕಾದ ಕಾರ್ಯ ಟ್ರಾಫಿಕ್ ಪೋಲೀಸರು ಮಾಡಬೇಕಾದ ಅನಿವಾರ್ಯತೆ..!

ಬಿಸಿರೋಡಿನಲ್ಲಿ ಟ್ರಾಫಿಕ್ ಪೋಲೀಸ್ ಸಿಬ್ಬಂದಿಗಳು ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳನ್ನು ಮುಚ್ಚಿದ ಅಪರೂಪದ ಸಂಗತಿಯೊಂದು ಇಂದು ಕಂಡು ಬಂದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿರೋಡಿನ ಸರ್ಕಲ್ ಬಳಿ ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವ ದೃಶ್ಯ ನಿತ್ಯ ಕಂಡು ಬರುತಿತ್ತು. ಇನ್ನೊಂದು ಕಡೆ ನಿತ್ಯ ಟ್ರಾಫಿಕ್ ಸಮಸ್ಯೆಗೂ ಕಾರಣವಾಗುತ್ತಿರುವ ಬಗ್ಗೆ ವರದಿಗಳು ಬಂದ ಹಿನ್ನೆಲೆಯಲ್ಲಿ ಬೇಸೆತ್ತ ಇಲ್ಲಿನ ಟ್ರಾಫಿಕ್ ಪೋಲೀಸ್ ಇಲಾಖೆಯ ಸಿಬ್ಬಂದಿಗಳು ಕಲ್ಲುಗಳನ್ನು ತಂದು ಗುಂಡಿ ಮುಚ್ಚುವ ಕಾರ್ಯವನ್ನು ಮಾಡಿದ್ದಾರೆ.

ಹೆದ್ದಾರಿ ಇಲಾಖೆಯವರು ಮಾಡಬೇಕಾದ ಕಾರ್ಯವನ್ನು ಬಂಟ್ವಾಳದಲ್ಲಿ ಟ್ರಾಫಿಕ್ ಕೆಲಸ ಮಾಡಬೇಕಾದ ಟ್ರಾಫಿಕ್ ಪೋಲೀಸ್ ಸಿಬ್ಬಂದಿಗಳು ಮಾಡಬೇಕಾದ ಅನಿವಾರ್ಯತೆ ಒದಗಿ ಬಂದಿದೆ ಎಂಬುದು ಬೇಸರ ತರುವಂತದ್ದು, ಇತ್ತೀಚೆಗೆ ಬಿಸಿರೋಡು ಬಸ್ ನಿಲ್ದಾಣ ಮುಂಭಾಗದಲ್ಲಿ ಆಗಿರುವ ಗುಂಡಿಯ ಬಗ್ಗೆಯೂ ವರದಿ ಬಿತ್ತರವಾದಾಗ ಟ್ರಾಫಿಕ್ ಎಸ್.ಐ.ಸುತೇಶ್ ನೇತ್ರತ್ವದಲ್ಲಿ ಕೆಲವು ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗಿತ್ತು. ಇದೀಗ ಮತ್ತೆ ಪೋಲೀಸರು ಗುಂಡಿಯನ್ನು ಮುಚ್ಚುವ ಮೂಲಕ ಹೆದ್ದಾರಿ ಇಲಾಖೆಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ಇನ್ನಾದರೂ ಹೆದ್ದಾರಿ ಇಲಾಖೆಯವರು ಹೆದ್ದಾರಿಯಲ್ಲಿ ಆಗಿರುವ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಿ ಎಂಬುದೇ ನಮ್ಮ ಆಶಯ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!