ಜನ ಮನದ ನಾಡಿ ಮಿಡಿತ

Advertisement

ಕಮಲಶಿಲೆ: ರಸ್ತೆಗೆ ಅಡ್ಡ ಬಂದ ಕಡವೆಗೆ ಬೈಕ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ಚಲಿಸುತ್ತಿದ್ದ ಬೈಕ್ ವೊಂದು ದಿಢೀರ್ ಆಗಿ ರಸ್ತೆಗೆ ಅಡ್ಡ ಬಂದು ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪ ತಾರೆಕುಡ್ಲುನಲ್ಲಿ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರ ನೆಲ್ಲಿಕಟ್ಟೆಯ ಶ್ರೇಯಸ್ ಮೊಗವೀರ (23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹಸವಾರ ವಿಶ್ಲೇಶ್ ಎಂದು ತಿಳಿದು ಬಂದಿದೆ. ಇವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಸ್ನೇಹಿತರು ಮಧ್ಯಾಹ್ನ ಕಮಲಶಿಲೆ ದೇವಸ್ಥಾನಕ್ಕೆ ಹೋಗಿದ್ದು ಅಲ್ಲಿಂದ ವಾಪಸು ನೆಲ್ಲಿಕಟ್ಟೆಗೆ ಬರುತ್ತಿದ್ದ ಸಂದರ್ಭ ತಾರೆಕುಡ್ಲು ಸಮೀಪ ದೊಡ್ಡ ಕಡವೆಯೊಂದು ಬೈಕ್ ಗೆ ಒಮ್ಮೆಲೇ ಅಡ್ಡ ಬಂದ ಪರಿಣಾಮ ಕಡವೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಶಂಕರನಾರಾಯಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!