ಜನ ಮನದ ನಾಡಿ ಮಿಡಿತ

Advertisement

ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ಅಪಘಾತ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು.

ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವನು ದಾರುಣ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.

ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್‌ರವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ. ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ, ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿ0ಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು. ಜುಬೈಲ್‌ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11 ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು. ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ, ಮೂವರು ಸಹೋದರಿಯರು, ಓರ್ವ ಸಹೋದರನನ್ನ ಅಗಲಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!