ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ

ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.

ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್.ಎನ್ (19) ವರ್ಷ. ಈಕೆ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಪ್ರಸ್ತುತ ಈಕೆ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಳು. ಮೈಸೂರಿನ ಪಿ.ಜಿ. ಯಿಂದ ಕಾಲೇಜಿಗೆ ಹೋಗುವ ಬದಲು ಹುಣಸೂರಿಗೆ ಬಂದು ತೂಗು ಸೇತುವೆ ಮೇಲೆ ಬ್ಯಾಗ್ ಇಟ್ಟು ನದಿಗೆ ಹಾರಿದ್ದಾಳೆ. ತಾಲೂಕಿನ ಕುಪ್ಪೆಕೊಳ್ಳಗಟ್ಟ ಗ್ರಾಮದ ಶರತ್ ಎಂಬಾತನನ್ನು ಮೃತ ದೀಪಿಕಾ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಶರತ್ ಹಾಗೂ ದೀಪಿಕಾ ಮೊಬೈಲ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ಲವ್ ಬ್ರೇಕಪ್‌ಗೆ ಮನನೊಂದು ನಗರದ ತೂಗು ಸೇತುವೆ ಬಳಿ ತೆರಳಿ ಸೇತವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರುವ ಮುನ್ನ ಡೆತ್‌ನೋಟ್ ನಲ್ಲಿ ಮೃತ ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!