ಜನ ಮನದ ನಾಡಿ ಮಿಡಿತ

Advertisement

ವೇದ ವಿದ್ವಾನ್ ಬೇಂಗ್ರೋಡಿ ಮಾಧವ ಭಟ್ ನಿಧನ

ದಕ್ಷಿಣ ಕನ್ನಡ :ಆರು ದಶಕಗಳಿಂದ ಪೌರೋಹಿತ್ಯ ವೃತ್ತಿ ಮಾಡಿಕೊಂಡು, ನೂರಾರು ಪುರೋಹಿತರನ್ನು ಬೆಳೆಸಿ ಸಮಾಜಕ್ಕೆ ಕೊಡುಗೆ ನೀಡಿದ, ಜನಾನುರಾಗಿ, ಮಿತಭಾಷಿ, ವೈದಿಕ ವಿದ್ವಾಂಸರು, ವೇದವಿಧಿ ಪಾರಂಗತ  ವೇದ ವಿದ್ವಾನ್ ಬೇಂಗ್ರೋಡಿ ಮಾಧವ ಭಟ್ಟರು ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ. 

ಇತ್ತೀಚಿನ ದಿನಗಳಲ್ಲಿ ವಯೋ ಸಹಜ ಕಾಯಿಯಿಂದ ಬಳಲುತ್ತಿದ್ದ ಭಟ್ಟರು   ಅನಾರೋಗ್ಯದ ದಿನಗಳಲ್ಲೂ ಸದಾಕಾಲ ಸೇವೆಗೆ ತನ್ನನ್ನು ಮುಡಿಪಾಗಿಟ್ಟ ಮಾಧಪ್ಪಣ್ಣನವರು ಇನ್ನು ನೆನಪು ಮಾತ್ರ. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು. ಪತ್ನಿ,ಮೂವರು ಗಂಡು ಮಕ್ಕಳು, ಐದು ಜನ ಹೆಣ್ಣು ಮಕ್ಕಳು, ಅಪಾರ ಶಿಷ್ಯವರ್ಗ, ಅನೇಕ ಬಂಧು ಬಾಂಧವರು ಮತ್ತು ಹಿತೈಷಿಗಳನ್ನು ಹೊಂದಿರುವ ಭಟ್ಟರ  ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ ಮತ್ತು ಈ ಅಗಲುವಿಕೆ ವೈದಿಕ ವಿಭಾಗದಲ್ಲಿ ಒಂದು ದೊಡ್ಡ ನಿರ್ವಾತ ಸೃಷ್ಟಿಸಿದೆ… ಎನ್ನುವುದು ಸಮುದಾಯದ ಅಭಿಪ್ರಾಯವಾಗಿದೆ ಸರ್ವಮಾನ್ಯ, ಸಜ್ಜನ, ಮೇಧಾವಿ, ಸರಳ, ಅತಿ ವಿರಳ ಸಾಕಾರಮೂರ್ತಿಯನ್ನು ಕಳೆದುಕೊಂಡಿದ್ದೇವೆ. ಮೃತರ ಆತ್ಮಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಮತ್ತು ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ಮಕ್ಕಳು, ಪರಿವಾರ, ಬಂಧು-ಬಳಗ, ಅಪಾರ ಶಿಷ್ಯ ವೃಂದ ಮತ್ತು ಹಿತೈಷಿಗಳಿಗೆ ನೀಡಲಿ ಎನ್ನುವುದು ಸಮಾಜದ ಈ ಕ್ಷಣದ ಪ್ರಾರ್ಥನೆ…

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!