ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ನೆಪವೊಡ್ಡಿ ರಾಜಕೀಯ ಪ್ರೇರಿತ ಪ್ರಕರಣ ದಾಖಲಾತಿ ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ

ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ ಅಧಿಕಾರಿಗಳ ನಡೆಯನ್ನು ಬಂಟ್ವಾಳ ತಾಲೂಕು ರಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಇದೊಂದು ರಾಜಕೀಯ ಪ್ರೇರಿತವಾಗಿದ್ದು ಮೇಲಾಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲು ಮಾಡಿರುವ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ಪ್ರಭಾಕರ ಪ್ರಭು ರವರು ಬರೆದಿರುವ ಲೇಟರ್ ಹೆಡ್ ಪತ್ರದಲ್ಲಿ ಮಾಜಿ ಸದಸ್ಯರು ಎಂದೂ ನಮೂದು ಮಾಡಿರುವುದರಿಂದ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಚಾರದ ಬಗ್ಗೆ ಪತ್ರದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಮತ್ತು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಯವರ ಪತ್ರಿಕಾ ಪ್ರಕಟಣೆಯಂತೆ ಇರುವ ವಿಷಯ ಕುರಿತು ಯಾರಿಗೂ ಒತ್ತಡ ಹೇರದಂತೆ ಜಿಲ್ಲಾ ಮಟ್ಟದ ಅಧಿಕಾರಿಯವರಿಗೆ ಪತ್ರ ಬರೆದಿದ್ದಾರೆಯೇ ಹೊರತು ಲೇಟರ್ ಹೆಡ್ ಮೂಲಕ ತಾಲೂಕು ಪಂಚಾಯತ್ ಇಲಾಖೆಯನ್ನು ದುರುಪಯೋಗ ಪಡಿಸಿರುವುದಿಲ್ಲ. ಮೇಲಾಧಿಕಾರಿಗಳು ದಿನಕ್ಕೆ 100 ರಂತೆ ಸಮೀಕ್ಷೆ ಮಾಡಬೇಕು ಎಂದೂ ಪ್ರತಿ ಪಂಚಾಯತ್‌ನ ಸಿಬ್ಬಂದಿಗಳಿಗೆ ಗುರಿ ನಿಗದಿ ಪಡಿಸಿರುವುದು ಪರೋಕ್ಷವಾಗಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಭಾಗವಹಿಸಲೇ ಬೇಕು ಅಂತಾ ಬಾಸವಗುತ್ತಿದೆ. ಜಿಲ್ಲೆಯಲ್ಲಿ ಅದೆಷ್ಟೋ ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅವರು ಪ್ರತಿನಿದಿಸಿರುವ ಕರ್ನಾಟಕ ಸರಕಾರ, ಇನ್ನಿತರ ಸ್ಥಳೀಯ ಸಂಸ್ಥೆಗಳ ಹೆಸರಿನಲ್ಲಿ ಲೇಟರ್ ಹೆಡ್ ಗಳು ಕಾರ್ಯಾಚರಣೆ ಆಗುತ್ತಿರುವುದನ್ನು ನಾವೆಲ್ಲರೂ ಕಂಡಿದ್ದೇವೆ. ಕೇವಲ ಸಮೀಕ್ಷೆಗೆ ಒತ್ತಡ ಹೇರದಂತೆ ಬರೆದಿರುವ ಪತ್ರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯ ವಾಗದ ಕಾರಣ ಲೇಟರ್ ಹೆಡ್ ನಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಂಬುದುದಾಗಿ ನಮೂದು ಮಾಡಿರುವುದರ ನೆಪದಲ್ಲಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವುದು ರಾಜಕೀಯ ದುರುದ್ದೇಶದ ಕ್ರತ್ಯ ವಾಗಿದೆ ಎಂದು ಹರೀಶ್ ಆಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!