ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ

ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಜೊತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾ.ಪಂ ವಠಾರದಲ್ಲೇ ಕಸದ ರಾಶಿ ತುಂಬಿದ್ದರೂ ಗ್ರಾ.ಪಂನಿಂದ ಬೇರೆಡೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು ಇದನ್ನು ನೋಡುವಾಗ ನಾಚಿಕೆಯಾಗುತ್ತಿದೆ ಎಂದು ಸುಪ್ರೀತ್ ಕಣ್ಣಾರಾಯ ಹೇಳಿದ್ದಾರೆ. ಪ್ರವೀಣ್ ಆಚಾರ್ಯ ನರಿಮೊಗರು ಮಾತನಾಡಿ ಗ್ರಾ.ಪಂ ವಠಾರದಲ್ಲಿ ಕಸದ ರಾಶಿ ತುಂಬಿದೆ, ಶೌಚಾಲಯದ ಅವಸ್ಥೆ ಹೇಳತೀರದಾಗಿದೆ, ಗ್ರಾ.ಪಂ ಅಂಗಳದಲ್ಲಿ ಪಾಚಿ ಹಿಡಿದು ಇತ್ತೀಚೆಗೆ ಮಹಿಳೆಯೊಬ್ಬರು ಬಿದ್ದು ಕಾಲು ಮುರಿತಕ್ಕೊಳಗಾಗಿದ್ದರೂ ಕೂಡಾ ಅದಕ್ಕೆ ಬೀಚಿಂಗ್ ಪೌಡರ್ ಹಾಕಲು ಪಂಚಾಯತ್‌ನಿಂದ ಸಾಧ್ಯವಾಗಿಲ್ಲ, ಇದೆಲ್ಲವೂ ಗ್ರಾ.ಪಂ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದ್ರು. ಇನ್ನೂ ಈ ಸಂದರ್ಭದಲ್ಲಿ ಕಮಲೇಶ್ ಎಸ್.ವಿ, ಸುಪ್ರೀತ್ ಕಣ್ಣಾರಾಯ, ಪ್ರವೀಣ್ ಆಚಾರ್ಯ, ಜಯಾನಂದ ಆಳ್ವ ಪಟ್ಟೆ, ಮಹಮ್ಮದ್ ಮುಂಡೂರು, ನೀಲಪ್ಪ ನಾಯ್ಕ ಅಂಬಟ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!