ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ…!

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬ0ಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು, ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್ ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದಿದ್ದಾರೆ.

2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕ ವಿಮಾ ಪರಿಹಾರವಾಗಿ 15,95,000ರೂ. ಹಣ ಕೋರಿಕೊಂಡಿದ್ದಾರೆ. ಈ ಸಂಬ0ಧ ವಿಮಾ ಕಂಪೆನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ಆಗಿರುವುದು ಕಂಡುಬ0ದಿದೆ. ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ತನಿಖೆ ನಡೆಸಿದಾಗ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!